ಅಂಬೆಗಾಲಿಕ್ಕುತಲಿ ಬಂದ
ರಚನೆಕಾರ: ಪುರಂದರದಾಸರು
ವರ್ಗ: ಶ್ರೀಕೃಷ್ಣ
ಅಂಬೆಗಾಲಿಕ್ಕುತಲಿ ಬಂದ ಗೋವಿಂದ || ಪ ||
ಅಂಬುಜನಾಭನು ದಯದಿಂದ ಎನ್ನ ಮನೆಗೆ || ಅ.ಪ ||
ಜಲಚರ ಜಲವಾಸ ಧರಣಿಧರ ಮೃಗರೂಪ
ನೆಲನಳೆದು ಮೂರಡಿ ಮಾಡಿ ಬಂದ
ಕುಲನಾಶ ವನಮಾಲಿ ನವನೀತ ಚೋರನಿವ
ಲಲನೆಯರ ವ್ರತಭಂಗ ವಾಹನತುರಂಗ || ೧ ||
ಕಣ್ಣು ಬಿಡುವನು ತನ್ನ ಬೆನ್ನ ತಗ್ಗಿಸುವನು
ಮಣ್ಣು ಕೊರೆದು ಕೋರೆ ಬಾಯ ತೆರೆದು
ಚಿಣ್ಣ ಭಾರ್ಗವ ಲಕ್ಷ್ಮಣಣ್ಣ ಬೆಣ್ಣೆಯ ಕಳ್ಳ
ಮನವನ ಬಿಟ್ಟು ಕುದುರೆಯನೇರಿದ || ೨ ||
ನೀರಪೊಕ್ಕನು ಗಿರಿಯ ನೆಗಹಿ ಧರಣಿಯ ತಂದು
ನರಮೃಗ ಬಲಿಬಂದ ಕೊರಳುಗೊಯಿಕ
ಶರಮುರಿದೊರಳೆಳೆದು ನಿರವಾಣಿ ಹಯಹತ್ತಿ
ಪುರಂದರ ವಿಠ್ಠಲ ಮನೆಗೆ ತಾ ಬಂದ || ೩ ||
ಅಂಬುಜನಾಭನು ದಯದಿಂದ ಎನ್ನ ಮನೆಗೆ || ಅ.ಪ ||
ಜಲಚರ ಜಲವಾಸ ಧರಣಿಧರ ಮೃಗರೂಪ
ನೆಲನಳೆದು ಮೂರಡಿ ಮಾಡಿ ಬಂದ
ಕುಲನಾಶ ವನಮಾಲಿ ನವನೀತ ಚೋರನಿವ
ಲಲನೆಯರ ವ್ರತಭಂಗ ವಾಹನತುರಂಗ || ೧ ||
ಕಣ್ಣು ಬಿಡುವನು ತನ್ನ ಬೆನ್ನ ತಗ್ಗಿಸುವನು
ಮಣ್ಣು ಕೊರೆದು ಕೋರೆ ಬಾಯ ತೆರೆದು
ಚಿಣ್ಣ ಭಾರ್ಗವ ಲಕ್ಷ್ಮಣಣ್ಣ ಬೆಣ್ಣೆಯ ಕಳ್ಳ
ಮನವನ ಬಿಟ್ಟು ಕುದುರೆಯನೇರಿದ || ೨ ||
ನೀರಪೊಕ್ಕನು ಗಿರಿಯ ನೆಗಹಿ ಧರಣಿಯ ತಂದು
ನರಮೃಗ ಬಲಿಬಂದ ಕೊರಳುಗೊಯಿಕ
ಶರಮುರಿದೊರಳೆಳೆದು ನಿರವಾಣಿ ಹಯಹತ್ತಿ
ಪುರಂದರ ವಿಠ್ಠಲ ಮನೆಗೆ ತಾ ಬಂದ || ೩ ||