ಆರು ಹಿತವರು ಎಂದು ನಂಬಬೇಡ
ರಚನೆಕಾರ: ಕನಕದಾಸರು
ವರ್ಗ: ಉಪದೇಶಾತ್ಮಕ
ಆರು ಹಿತವರು ಎಂದು ನಂಬಬೇಡ || ಪ ||
ಯಾರಿಗ್ಯಾರಿಲ್ಲ ಆಪತ್ತು ಬಂದೊದಗಿದಡೆ || ಅ.ಪ. ||
ಜನಕ ಹಿತದವನೆಂದು ನಂಬಬಹುದೇ ಹಿಂದೆ
ತನಯ ಪ್ರಹ್ಲಾದನಿಗೆ ಪಿತ ಮುನಿದನು
ಜನನಿಯೇ ರಕ್ಷಿಪಳೆಂತೆಂಬೆನೆ ಆ ಕುಂತಿ
ತನಯ ರಾಧೇಯನಿಗೆ ಎರಡೆಣಿಸಿದ ಮೇಲೆ || ೧ ||
ಮಗನು ತೆತ್ತಿಗನೆನಲು ಕಂಸ ತನ್ನಯ ಪಿತನ
ವಿಗಡ ಬಂಧನದಿಂದ ಬಂಧಿಸಿದನು
ಜಗವರಿಯೇ ಸೋದರನು ಮಮತೆಯುಳ್ಳವನೆನಲು
ಹಗೆವರಸಿ ವಾಲಿಯನು ಅನುಜ ಕೊಲಿಸಿದ ಮೇಲೆ || ೨ ||
ತನಗೆ ದೇಹಾನುಬಂಧುಗಳೇ ಬಂಧುಗಳೆಂದು
ಮನದಿ ನಿಶ್ಚಯವಾಗಿ ನಂಬಬೇಡ
ಘನಕೃಪಾನಿಧಿ ಕಾಗಿನೆಲೆಯಾದಿಕೇಶವ
ಅನುದಿನ ನಂಬಿದವಗಿಹಪರದಿ ಸುಖವು || ೩ ||
ಯಾರಿಗ್ಯಾರಿಲ್ಲ ಆಪತ್ತು ಬಂದೊದಗಿದಡೆ || ಅ.ಪ. ||
ಜನಕ ಹಿತದವನೆಂದು ನಂಬಬಹುದೇ ಹಿಂದೆ
ತನಯ ಪ್ರಹ್ಲಾದನಿಗೆ ಪಿತ ಮುನಿದನು
ಜನನಿಯೇ ರಕ್ಷಿಪಳೆಂತೆಂಬೆನೆ ಆ ಕುಂತಿ
ತನಯ ರಾಧೇಯನಿಗೆ ಎರಡೆಣಿಸಿದ ಮೇಲೆ || ೧ ||
ಮಗನು ತೆತ್ತಿಗನೆನಲು ಕಂಸ ತನ್ನಯ ಪಿತನ
ವಿಗಡ ಬಂಧನದಿಂದ ಬಂಧಿಸಿದನು
ಜಗವರಿಯೇ ಸೋದರನು ಮಮತೆಯುಳ್ಳವನೆನಲು
ಹಗೆವರಸಿ ವಾಲಿಯನು ಅನುಜ ಕೊಲಿಸಿದ ಮೇಲೆ || ೨ ||
ತನಗೆ ದೇಹಾನುಬಂಧುಗಳೇ ಬಂಧುಗಳೆಂದು
ಮನದಿ ನಿಶ್ಚಯವಾಗಿ ನಂಬಬೇಡ
ಘನಕೃಪಾನಿಧಿ ಕಾಗಿನೆಲೆಯಾದಿಕೇಶವ
ಅನುದಿನ ನಂಬಿದವಗಿಹಪರದಿ ಸುಖವು || ೩ ||