ದಾಸರಾಯ ಪುರಂದರ ದಾಸರಾಯ
ರಚನೆಕಾರ: ಜಗನ್ನಾಥದಾಸರು
ವರ್ಗ: ಗುರು ಕೀರ್ತನೆ
ದಾಸರಾಯ ಪುರಂದರ ದಾಸರಾಯ || ಪ ||
ದಾಸರಾಯ ಪ್ರತಿವಾಸರದಲಿ ಶ್ರೀನಿವಾಸನ್ನ
ತೋರೋ ದಯಾಸಾಂದ್ರ || ಅ.ಪ ||
ವರದನಾಮಕ ಭೂಸುರನ ಮಡದಿ ಬಸಿರಲಿ
ಜನಿಸಿ ಬಂದು ಮೆರೆದೆ ಧರಣಿಯೊಳು || ೧ ||
ಕುಲಿಶಧರಾಹ್ವಯ ಪೊಳಲೊಳು ಮಡದಿ
ಮಕ್ಕಳ ಕೂಡಿ ಸುಖದಿ ಕೆಲ ಕಾಲದಲಿದ್ಯೊ || ೨ ||
ವ್ಯಾಸರಾಯರಲಿ ಭಾಸುರ ಮಂತ್ರೋಪದೇಶವ
ಕೊಂಡು ರಮೇಶನ ಒಲಿಸಿದ್ಯೊ || ೩ ||
ಮನೆ ಧನ ಧಾನ್ಯ ವಾಹನ ವಸ್ತುಗಳನೆಲ್ಲ
ತೃಣಕೆ ಬಗೆದು ಕೃಷ್ಣಾರ್ಪಣವೆಂದೆ ಬುಧರಿಗೆ || ೪ ||
ಪ್ರಾಕೃತ ಭಾಷೆಯೊಳ್ ನೀ ಕೃತಿ ಪೇಳಿ ಆ
ಪ್ರಾಕೃತ ಹರಿಯಿಂದ ಸ್ವೀಕೃತ ನೀನಾದ್ಯೊ || ೫ ||
ತೀರ್ಥಕ್ಷೇತ್ರಗಳ ಮೂರ್ತಿ ಮಹಿಮೆಗಳ
ಕೀರ್ತಿಸಿ ಜಗದಿ ಕೃತಾರ್ಥನೆಂದೆನಿಸಿದೆ || ೬ ||
ಪಾತಕ ವನಧಿ ಪೋತನೆನಿಪ ಜಗ
ನ್ನಾಥ ವಿಠ್ಠಲನ ಸುಪ್ರೀತಿಯಿಂದೊಲಿಸಿದೆ || ೭ ||
ದಾಸರಾಯ ಪ್ರತಿವಾಸರದಲಿ ಶ್ರೀನಿವಾಸನ್ನ
ತೋರೋ ದಯಾಸಾಂದ್ರ || ಅ.ಪ ||
ವರದನಾಮಕ ಭೂಸುರನ ಮಡದಿ ಬಸಿರಲಿ
ಜನಿಸಿ ಬಂದು ಮೆರೆದೆ ಧರಣಿಯೊಳು || ೧ ||
ಕುಲಿಶಧರಾಹ್ವಯ ಪೊಳಲೊಳು ಮಡದಿ
ಮಕ್ಕಳ ಕೂಡಿ ಸುಖದಿ ಕೆಲ ಕಾಲದಲಿದ್ಯೊ || ೨ ||
ವ್ಯಾಸರಾಯರಲಿ ಭಾಸುರ ಮಂತ್ರೋಪದೇಶವ
ಕೊಂಡು ರಮೇಶನ ಒಲಿಸಿದ್ಯೊ || ೩ ||
ಮನೆ ಧನ ಧಾನ್ಯ ವಾಹನ ವಸ್ತುಗಳನೆಲ್ಲ
ತೃಣಕೆ ಬಗೆದು ಕೃಷ್ಣಾರ್ಪಣವೆಂದೆ ಬುಧರಿಗೆ || ೪ ||
ಪ್ರಾಕೃತ ಭಾಷೆಯೊಳ್ ನೀ ಕೃತಿ ಪೇಳಿ ಆ
ಪ್ರಾಕೃತ ಹರಿಯಿಂದ ಸ್ವೀಕೃತ ನೀನಾದ್ಯೊ || ೫ ||
ತೀರ್ಥಕ್ಷೇತ್ರಗಳ ಮೂರ್ತಿ ಮಹಿಮೆಗಳ
ಕೀರ್ತಿಸಿ ಜಗದಿ ಕೃತಾರ್ಥನೆಂದೆನಿಸಿದೆ || ೬ ||
ಪಾತಕ ವನಧಿ ಪೋತನೆನಿಪ ಜಗ
ನ್ನಾಥ ವಿಠ್ಠಲನ ಸುಪ್ರೀತಿಯಿಂದೊಲಿಸಿದೆ || ೭ ||