ದುರಿತಗಜ ಪಂಚಾನನ
ರಚನೆಕಾರ: ಶ್ರೀಪಾದರಾಜರು
ವರ್ಗ: ನರಸಿಂಹ
ದುರಿತಗಜ ಪಂಚಾನನ-ನರಹರಿಯೆ ದೇವರ ದೇವ ಕಾಯೊ ಗೋವಿಂದ || ಪ ||
ಹೆಸರುಳ್ಳ ನದಿಗಳು ಒಳಗೊಂಬೊ ಸಮುದ್ರನು
ಬಿಸುಡುವನೆ ಕಾಲುಹೊಳೆಗಳ ಗೋವಿಂದ || ೧ ||
ಒಂದು ಮೊಲಕೆ ಆರು ಹುಲಿ ಬಂದು ಕವಿದಿದೆ
ಬಂಧನ ಬಿಡೆಸೆನ್ನ ತಂದೆ ಗೋವಿಂದ || ೨ ||
ಹೆತ್ತ ಮಕ್ಕಳು ಹುಚ್ಚರಾದರೆ ತಾಯಿ ತಂದೆ
ಎತ್ತದೆ ನೆಲಕೆ ಬಿಸುಡುವರೆ ಗೋವಿಂದ || ೩ ||
ಮುನ್ನ ಮಾಡಿದ ಕರ್ಮ ಬೆನ್ನ ಬಿಡದಿದ್ದರೆ
ನಿನ್ನ ವಾಲೈಸಲ್ಯಾಕೆ ಗೋವಿಂದ || ೪ ||
ಆಪತ್ತು ತಾಪತ್ರಯ ಬೆನ್ನ ಬಿಡದಿದ್ದರೆ
ಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ || ೫ ||
ಅರಸು ಮುಟ್ಟಲು ದಾಸಿ ರಂಭೆಯಾದಳು ದೇವ
ಪುರುಷ ಮುಟ್ಟಲು ಲೋಹ ಸ್ವರ್ಣ ಗೋವಿಂದ || ೬ ||
ಮಾನಾಭಿಮಾನದೊಡೆಯ ರಂಗವಿಠಲ
ಜ್ಞಾನಿಗಳರಸನೆ ಕಾಯೋ ಗೋವಿಂದ || ೭ ||
ಹೆಸರುಳ್ಳ ನದಿಗಳು ಒಳಗೊಂಬೊ ಸಮುದ್ರನು
ಬಿಸುಡುವನೆ ಕಾಲುಹೊಳೆಗಳ ಗೋವಿಂದ || ೧ ||
ಒಂದು ಮೊಲಕೆ ಆರು ಹುಲಿ ಬಂದು ಕವಿದಿದೆ
ಬಂಧನ ಬಿಡೆಸೆನ್ನ ತಂದೆ ಗೋವಿಂದ || ೨ ||
ಹೆತ್ತ ಮಕ್ಕಳು ಹುಚ್ಚರಾದರೆ ತಾಯಿ ತಂದೆ
ಎತ್ತದೆ ನೆಲಕೆ ಬಿಸುಡುವರೆ ಗೋವಿಂದ || ೩ ||
ಮುನ್ನ ಮಾಡಿದ ಕರ್ಮ ಬೆನ್ನ ಬಿಡದಿದ್ದರೆ
ನಿನ್ನ ವಾಲೈಸಲ್ಯಾಕೆ ಗೋವಿಂದ || ೪ ||
ಆಪತ್ತು ತಾಪತ್ರಯ ಬೆನ್ನ ಬಿಡದಿದ್ದರೆ
ಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ || ೫ ||
ಅರಸು ಮುಟ್ಟಲು ದಾಸಿ ರಂಭೆಯಾದಳು ದೇವ
ಪುರುಷ ಮುಟ್ಟಲು ಲೋಹ ಸ್ವರ್ಣ ಗೋವಿಂದ || ೬ ||
ಮಾನಾಭಿಮಾನದೊಡೆಯ ರಂಗವಿಠಲ
ಜ್ಞಾನಿಗಳರಸನೆ ಕಾಯೋ ಗೋವಿಂದ || ೭ ||