ಗುರುವಿನ ಗುಲಾಮನಾಗುವ ತನಕ

ರಚನೆಕಾರ: ಪುರಂದರದಾಸರು

ವರ್ಗ: ಉಪದೇಶಾತ್ಮಕ

ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ || ಪ ||

ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ || ಅ.ಪ ||

ಆರು ಶಾಸ್ತ್ರವ ಓದಿದರಿಲ್ಲ
ಮೂರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳಿದರಿಲ್ಲ
ಧೀರನಾಗಿ ತಾ ಪೇಳಿದರಿಲ್ಲ || ೧ ||

ಕೊರಳೊಳು ಮಾಲೆ ಧರಿಸಿದರಿಲ್ಲ
ಬೆರಳೊಳು ಜಪಮಣಿ ಎಣಿಸಿದರಿಲ್ಲ
ಮರುಳನಾಗಿ ಶರೀರಕೆ ಬೂದಿ
ಒರೆಸಿಕೊಂಡು ತಾ ತಿರುಗಿದರಿಲ್ಲ || ೨ ||

ನಾರಿಯ ಭೋಗ ಅಳಿಸಿದರಿಲ್ಲ
ಶಾರೀರಿಕ ಸುಖವ ಬಿಡಿಸಿದರಿಲ್ಲ
ನಾರದವರದ ಪುರಂದರ ವಿಠ್ಠಲನ
ಸೇರಿಕೊಂಡು ತಾ ಪಡೆಯುವ ತನಕ || ೩ ||