ಕಾಳಬೆಳದಿಂಗಳು ಈ ಸಂಸಾರ
ರಚನೆಕಾರ: ಶ್ರೀಪಾದರಾಜರು
ವರ್ಗ: ಉಪದೇಶಾತ್ಮಕ
ಕಾಳಬೆಳದಿಂಗಳು ಈ ಸಂಸಾರ ಕತ್ತಲೆ ಬೆಳದಿಂಗಳು || ಪ ||
ಸತ್ಯಕ್ಕೆ ಧರ್ಮನು ಲೆತ್ತವನಾಡಲು
ಅರ್ಧ ಭಾಂಡಾರವೆಲ್ಲವ ಸೋತು
ಮತ್ತೆ ವಿರಾಟರಾಯನ ಮನೆಯಲ್ಲಿ
ತೊತ್ತಾದಳು ದ್ರೌಪದಿ ಒಂದು ವರುಷ || ೧ ||
ಪುಂಡರೀಕಾಕ್ಷ ಪುರುಷೋತ್ತಮ ಹರಿಯು
ಬಂಡಿಬೋವನಾದ ಪಾರ್ಥನಿಗೆ ಭೂ –
ಮಂಡಲನಾಳುವ ಹರಿಶ್ಚಂದ್ರರಾಯನು
ಕೊಂಡವ ಕಾಯಿದನು ಹೊಲೆಯನಾಳಾಗಿ || ೨ ||
ಉಂಟಾದ ಕಾಲಕ್ಕೆ ನೆಂಟರು ಇಷ್ಟರು
ಬಂಟರಾಗಿ ಬಾಗಿಲ ಕಾಯ್ವರು
ಉಂಟಾದತನ ತಪ್ಪಿ ಬಡತನ ಬಂದರೆ
ಒಂಟೆಯಂತೆ ಗೋಣ ಮೇಲೆತ್ತುವರು || ೩ ||
ಉಂಬಾಗ ಉಡುವಾಗ ಕೊಂಬಾಗ ಕೊಡುವಾಗ
ಬೆಂಬಲದಲಿ ನಲಿನಲಿವುತಿಹರು
ಬೆಂಬಲತನ ತಪ್ಪಿ ಬಡತನ ಬಂದರೆ
ಇಂಬು ನಿನಗಿಲ್ಲ ನಡೆಯೆಂಬರು || ೪ ||
ಏರುವ ದಂಡಿಗೆ ನೂರಾಳು ಮಂದಿಯು
ಮೂರುದಿನದ ಭಾಗ್ಯವು ಝಣಝಣವು
ನೂರಾರು ಸಾವಿರ ದಂಡವ ತೆತ್ತರೆ
ರಂಗವಿಠಲನನೆ ಸರಿಯೆಂಬೊರಯ್ಯ || ೫ ||
ಸತ್ಯಕ್ಕೆ ಧರ್ಮನು ಲೆತ್ತವನಾಡಲು
ಅರ್ಧ ಭಾಂಡಾರವೆಲ್ಲವ ಸೋತು
ಮತ್ತೆ ವಿರಾಟರಾಯನ ಮನೆಯಲ್ಲಿ
ತೊತ್ತಾದಳು ದ್ರೌಪದಿ ಒಂದು ವರುಷ || ೧ ||
ಪುಂಡರೀಕಾಕ್ಷ ಪುರುಷೋತ್ತಮ ಹರಿಯು
ಬಂಡಿಬೋವನಾದ ಪಾರ್ಥನಿಗೆ ಭೂ –
ಮಂಡಲನಾಳುವ ಹರಿಶ್ಚಂದ್ರರಾಯನು
ಕೊಂಡವ ಕಾಯಿದನು ಹೊಲೆಯನಾಳಾಗಿ || ೨ ||
ಉಂಟಾದ ಕಾಲಕ್ಕೆ ನೆಂಟರು ಇಷ್ಟರು
ಬಂಟರಾಗಿ ಬಾಗಿಲ ಕಾಯ್ವರು
ಉಂಟಾದತನ ತಪ್ಪಿ ಬಡತನ ಬಂದರೆ
ಒಂಟೆಯಂತೆ ಗೋಣ ಮೇಲೆತ್ತುವರು || ೩ ||
ಉಂಬಾಗ ಉಡುವಾಗ ಕೊಂಬಾಗ ಕೊಡುವಾಗ
ಬೆಂಬಲದಲಿ ನಲಿನಲಿವುತಿಹರು
ಬೆಂಬಲತನ ತಪ್ಪಿ ಬಡತನ ಬಂದರೆ
ಇಂಬು ನಿನಗಿಲ್ಲ ನಡೆಯೆಂಬರು || ೪ ||
ಏರುವ ದಂಡಿಗೆ ನೂರಾಳು ಮಂದಿಯು
ಮೂರುದಿನದ ಭಾಗ್ಯವು ಝಣಝಣವು
ನೂರಾರು ಸಾವಿರ ದಂಡವ ತೆತ್ತರೆ
ರಂಗವಿಠಲನನೆ ಸರಿಯೆಂಬೊರಯ್ಯ || ೫ ||