ನಾರಾಯಣ ಎನ್ನಿರೋ
ರಚನೆಕಾರ: ಪುರಂದರದಾಸರು
ಗಾಯನ: ಶಶಿಕಾಂತ ರಾವ್
ವರ್ಗ: ವಿಷ್ಣು
ನಾರಾಯಣ ಎನ್ನಿರೋ
ಶ್ರೀ ನರಹರಿ ಪಾರಾಯಣ ಮಾಡಿರೋ || ಪ ||
ನಾರಾಯಣನೆಂದು ಅಜಾಮಿಳನು ಕೈವಲ್ಯ
ಸೇರಿದನೆಂಬೊ ಸುದ್ದಿಯ ಕೇಳಿ ಅರಿಯಿರಾ || ಅ.ಪ ||
ಕಾಶಿಗೆ ಹೋಗಲೇಕೆ, ಕಾವಡಿ ಪೊತ್ತು
ಬೇಸತ್ತು ತಿರುಗಲೇಕೆ
ವಾಸುದೇವನ ನಾಮ ಬಾಯ್ತುಂಬ ನೆನೆದರೆ
ಕ್ಲೇಶಗಳೆಂಬುದನು ಲೇಶ ಮಾತ್ರವಿಲ್ಲದೆ || ೧ ||
ಚೋರರ ಭಯವಿಲ್ಲವೊ, ಹರಿನಾಮಕ್ಕೆ
ಯಾರ ಅಂಕೆಯಿಲ್ಲವೊ
ಊರನಾಳುವ ದೊರೆ ನೀತಿ ಭೀತಿಗಳಿಲ್ಲ
ಘೋರಪಾತಕವೆಲ್ಲ ದೂರ ಮಾಡುವುದಕ್ಕೆ || ೨ ||
ಸ್ನಾನವ ಮಾಡಲೇಕೆ, ಮಾನವರಿಗೆ
ಮೌನ ಮಂತ್ರಗಳೇಕೆ
ದೀನಪಾಲಕ ನಮ್ಮ ಬೆಟ್ಟದೊಡೆಯನ
ಧ್ಯಾನಕೆ ಸರಿಯುಂಟೆ ಪುರಂದರವಿಠಲನ || ೩ ||
ಶ್ರೀ ನರಹರಿ ಪಾರಾಯಣ ಮಾಡಿರೋ || ಪ ||
ನಾರಾಯಣನೆಂದು ಅಜಾಮಿಳನು ಕೈವಲ್ಯ
ಸೇರಿದನೆಂಬೊ ಸುದ್ದಿಯ ಕೇಳಿ ಅರಿಯಿರಾ || ಅ.ಪ ||
ಕಾಶಿಗೆ ಹೋಗಲೇಕೆ, ಕಾವಡಿ ಪೊತ್ತು
ಬೇಸತ್ತು ತಿರುಗಲೇಕೆ
ವಾಸುದೇವನ ನಾಮ ಬಾಯ್ತುಂಬ ನೆನೆದರೆ
ಕ್ಲೇಶಗಳೆಂಬುದನು ಲೇಶ ಮಾತ್ರವಿಲ್ಲದೆ || ೧ ||
ಚೋರರ ಭಯವಿಲ್ಲವೊ, ಹರಿನಾಮಕ್ಕೆ
ಯಾರ ಅಂಕೆಯಿಲ್ಲವೊ
ಊರನಾಳುವ ದೊರೆ ನೀತಿ ಭೀತಿಗಳಿಲ್ಲ
ಘೋರಪಾತಕವೆಲ್ಲ ದೂರ ಮಾಡುವುದಕ್ಕೆ || ೨ ||
ಸ್ನಾನವ ಮಾಡಲೇಕೆ, ಮಾನವರಿಗೆ
ಮೌನ ಮಂತ್ರಗಳೇಕೆ
ದೀನಪಾಲಕ ನಮ್ಮ ಬೆಟ್ಟದೊಡೆಯನ
ಧ್ಯಾನಕೆ ಸರಿಯುಂಟೆ ಪುರಂದರವಿಠಲನ || ೩ ||