ಸುಮ್ಮನೆ ವೈಷ್ಣವನೆಂಬಿರಿ
ರಚನೆಕಾರ: ಶ್ರೀಪಾದರಾಜರು
ವರ್ಗ: ಉಪದೇಶಾತ್ಮಕ
ಸುಮ್ಮನೆ ವೈಷ್ಣವನೆಂಬಿರಿ ಪರ ಬೊಮ್ಮ
ಸುಜ್ಞಾನವನರಿಯದ ಮನುಜನ || ಪ ||
ಮುಖವ ತೊಳೆದು ನಾಮವನಿಟ್ಟೆನಲ್ಲದೆ
ಸುಖತೀರ್ಥಶಾಸ್ತ್ರವನೋದಿದನೆ
ಸುಖಕೆ ಶೃಂಗಾರಕೆ ಮಾಲೆ ಹಾಕಿದನಲ್ಲದೆ
ಭಕುತಿ ರಸದಲ್ಲಿ ಮುಳುಗಿದೆನೇನಯ್ಯ || ೧ ||
ಊರು ಮಾತುಗಳಾಡಿ ದಣಿದೆನಲ್ಲದೆ
ನಾರಾಯಣ ಕೃಷ್ಣ ಶರಣೆಂದೆನೆ
ನಾರಿಯ ನುಡಿ ಕೇಳಿ ಮರುಳಾದೆನಲ್ಲದೆ
ಗುರುಹಿರಿಯರ ಮಾತ ಮನ್ನಿಸಿದೆನೇನಯ್ಯ || ೨ ||
ನರೋತ್ತಮರಿಗಧಿಕ ಗಂಧರ್ವರಿಗಧಿಕ
ಸುರೇಂದ್ರಗಧಿಕ ಹರಗಧಿಕ
ವಿರಿಂಚಿಗಧಿಕ ಸಿರಿಗಧಿಕ
ಹರಿ ಸರ್ವೋತ್ತಮನೆಂದು ತಿಳಿದೆನೇನಯ್ಯ || ೩ ||
ಜಗತು ಸತ್ಯವೆಂದು ಪಂಚಭೇದವ ತಿಳಿದು
ಮಿಗೆ ರಾಗದ್ವೇಷಂಗಳನು ವರ್ಜಿಸಿ
ಭಗವಂತನ ಲೀಲೆ ಶ್ರವಣ ಕಥೆಗಳಿಂದ
ನಿಗಮಗೋಚರನೆಂದು ತಿಳಿದೆನೇನಯ್ಯ || ೪ ||
ಗಂಗೆಯಲಿ ಮೈ ಬಣ್ಣ ತೊಳೆದೆನಲ್ಲದೆ
ಭವಹಿಂಗುವ ಸ್ನಾನವ ಮಾಡಿದೆನೆ
ರಂಗವಿಠಲನ ನಿಜವಾದ ದಾಸರ
ಸಂಗ ಸುಖವೆಂದು ತಿಳಿದೆನೇನಯ್ಯ || ೫ ||
ಸುಜ್ಞಾನವನರಿಯದ ಮನುಜನ || ಪ ||
ಮುಖವ ತೊಳೆದು ನಾಮವನಿಟ್ಟೆನಲ್ಲದೆ
ಸುಖತೀರ್ಥಶಾಸ್ತ್ರವನೋದಿದನೆ
ಸುಖಕೆ ಶೃಂಗಾರಕೆ ಮಾಲೆ ಹಾಕಿದನಲ್ಲದೆ
ಭಕುತಿ ರಸದಲ್ಲಿ ಮುಳುಗಿದೆನೇನಯ್ಯ || ೧ ||
ಊರು ಮಾತುಗಳಾಡಿ ದಣಿದೆನಲ್ಲದೆ
ನಾರಾಯಣ ಕೃಷ್ಣ ಶರಣೆಂದೆನೆ
ನಾರಿಯ ನುಡಿ ಕೇಳಿ ಮರುಳಾದೆನಲ್ಲದೆ
ಗುರುಹಿರಿಯರ ಮಾತ ಮನ್ನಿಸಿದೆನೇನಯ್ಯ || ೨ ||
ನರೋತ್ತಮರಿಗಧಿಕ ಗಂಧರ್ವರಿಗಧಿಕ
ಸುರೇಂದ್ರಗಧಿಕ ಹರಗಧಿಕ
ವಿರಿಂಚಿಗಧಿಕ ಸಿರಿಗಧಿಕ
ಹರಿ ಸರ್ವೋತ್ತಮನೆಂದು ತಿಳಿದೆನೇನಯ್ಯ || ೩ ||
ಜಗತು ಸತ್ಯವೆಂದು ಪಂಚಭೇದವ ತಿಳಿದು
ಮಿಗೆ ರಾಗದ್ವೇಷಂಗಳನು ವರ್ಜಿಸಿ
ಭಗವಂತನ ಲೀಲೆ ಶ್ರವಣ ಕಥೆಗಳಿಂದ
ನಿಗಮಗೋಚರನೆಂದು ತಿಳಿದೆನೇನಯ್ಯ || ೪ ||
ಗಂಗೆಯಲಿ ಮೈ ಬಣ್ಣ ತೊಳೆದೆನಲ್ಲದೆ
ಭವಹಿಂಗುವ ಸ್ನಾನವ ಮಾಡಿದೆನೆ
ರಂಗವಿಠಲನ ನಿಜವಾದ ದಾಸರ
ಸಂಗ ಸುಖವೆಂದು ತಿಳಿದೆನೇನಯ್ಯ || ೫ ||