ವ್ಯರ್ಥವಲ್ಲವೆ ಜನ್ಮ ವ್ಯರ್ಥವಲ್ಲವೆ
ರಚನೆಕಾರ: ಶ್ರೀಪಾದರಾಜರು
ವರ್ಗ: ಉಪದೇಶಾತ್ಮಕ
ವ್ಯರ್ಥವಲ್ಲವೆ ಜನ್ಮ ವ್ಯರ್ಥವಲ್ಲವೆ || ಪ ||
ತೀರ್ಥಪಾದರ ಭಜಿಸಿ ಕೃತಾರ್ಥನಾಗದವನ ಜನ್ಮ || ಅ.ಪ. ||
ಅರುಣ ಉದಯದಲ್ಲಿ ಎದ್ದು ಸರಿತದಲಿ ಸ್ನಾನವ ಮಾಡಿ
ಅರಳುಮಲ್ಲಿಗೆ ಮಾಲೆ ಹರಿಯ ಚರಣಕ್ಕರ್ಪಿಸದವನ ಜನ್ಮ || ೧ ||
ಒಂದು ಶಂಖ ಉದಕ ತಂದು ಚಂದದಿಂದ ಹರಿಗೆ ಎರೆದು
ಗಂಧ ಪುಷ್ಪದಿಂದ ಹರಿಯ ವಂದನೆ ಮಾಡದವನ ಜನ್ಮ || ೨ ||
ಮುಗುಳು ತೆನೆಯಲೆಸೆವ ತುಳಸಿದಳವ ತಂದು ಪ್ರೇಮದಿಂದ
ಜಗನ್ಮಯಗೆ ಅರ್ಪಿಸಿ ಕರವ ಮುಗಿದು ಸ್ತುತಿಸದವನ ಜನ್ಮ || ೩ ||
ಭೋಗಿಶಯನನ ದಿನದಿ ಸಕಲ ಭೋಗಗಳನು ತಾನು ತೊರೆದು
ಭಾಗವತರ ಮ್ಯಾಳದಿಂದ ಜಾಗರಣೆ ಮಾಡದವನ ಜನ್ಮ || ೪ ||
ಜಂಗಮರೊಳಗಧಿಕವನಿಪ ಭಂಗುರ ಮನುಷ್ಯದೇಹ ಪಡೆದು
ರಂಗವಿಠಲನೆನಿಪ ಪಶ್ಚಿಮರಂಗಗರ್ಪಿಸದವನ ಜನ್ಮ || ೫ ||
ತೀರ್ಥಪಾದರ ಭಜಿಸಿ ಕೃತಾರ್ಥನಾಗದವನ ಜನ್ಮ || ಅ.ಪ. ||
ಅರುಣ ಉದಯದಲ್ಲಿ ಎದ್ದು ಸರಿತದಲಿ ಸ್ನಾನವ ಮಾಡಿ
ಅರಳುಮಲ್ಲಿಗೆ ಮಾಲೆ ಹರಿಯ ಚರಣಕ್ಕರ್ಪಿಸದವನ ಜನ್ಮ || ೧ ||
ಒಂದು ಶಂಖ ಉದಕ ತಂದು ಚಂದದಿಂದ ಹರಿಗೆ ಎರೆದು
ಗಂಧ ಪುಷ್ಪದಿಂದ ಹರಿಯ ವಂದನೆ ಮಾಡದವನ ಜನ್ಮ || ೨ ||
ಮುಗುಳು ತೆನೆಯಲೆಸೆವ ತುಳಸಿದಳವ ತಂದು ಪ್ರೇಮದಿಂದ
ಜಗನ್ಮಯಗೆ ಅರ್ಪಿಸಿ ಕರವ ಮುಗಿದು ಸ್ತುತಿಸದವನ ಜನ್ಮ || ೩ ||
ಭೋಗಿಶಯನನ ದಿನದಿ ಸಕಲ ಭೋಗಗಳನು ತಾನು ತೊರೆದು
ಭಾಗವತರ ಮ್ಯಾಳದಿಂದ ಜಾಗರಣೆ ಮಾಡದವನ ಜನ್ಮ || ೪ ||
ಜಂಗಮರೊಳಗಧಿಕವನಿಪ ಭಂಗುರ ಮನುಷ್ಯದೇಹ ಪಡೆದು
ರಂಗವಿಠಲನೆನಿಪ ಪಶ್ಚಿಮರಂಗಗರ್ಪಿಸದವನ ಜನ್ಮ || ೫ ||