ಯಾದವರಾಯ ಬೃಂದಾವನದೊಳು
ರಚನೆಕಾರ: ಕನಕದಾಸರು
ವರ್ಗ: ಶ್ರೀಕೃಷ್ಣ
ಯಾದವರಾಯ ಬೃಂದಾವನದೊಳು
ವೇಣುನಾದವ ಮಾಡುತಿರೆ || ಪ ||
ರಾಧಾ ಮುಂತಾದ ಗೋಪಿಯರೆಲ್ಲ
ಮಧುಸೂದನ ನಿನ್ನನು ಸೇವಿಸುತಿರೆ
ಸುರರು ಅಂಬರದಿ ಸಂದಣಿಸಿರೆ
ಅಪ್ಸರ ಸ್ತ್ರೀಯರು ಮೈಮರೆತಿರೆ || ಅ.ಪ ||
ಕರದಲಿ ಕೊಳಲನು ಊದುತ ಪಾಡುತ
ಸ ರಿ ಗ ಮ ಪ ದ ನಿ ಸ್ವರಗಳ ನುಡಿಸುತ
ಹರಿ ಹರ ಬ್ರಹ್ಮರು ನಲಿದಾಡುತಿರೆ
ತುಂಬುರು ನಾರದರು ಪಾಡುತಿರೆ || ೧ ||
ಅರವಿಂದದಳನಯನ
ಕರುಗಳ ಸಹಿತಲೇ ಗೋಕುಲವೆಲ್ಲ
ಸಿರಿ ಕಾಗಿನೆಲೆಯಾದಿಕೇಶವರಾಯ
ತರುಗಳ ಸಹಿತಲೇ ವರಗೋಪಾಲ || ೨ ||
ವೇಣುನಾದವ ಮಾಡುತಿರೆ || ಪ ||
ರಾಧಾ ಮುಂತಾದ ಗೋಪಿಯರೆಲ್ಲ
ಮಧುಸೂದನ ನಿನ್ನನು ಸೇವಿಸುತಿರೆ
ಸುರರು ಅಂಬರದಿ ಸಂದಣಿಸಿರೆ
ಅಪ್ಸರ ಸ್ತ್ರೀಯರು ಮೈಮರೆತಿರೆ || ಅ.ಪ ||
ಕರದಲಿ ಕೊಳಲನು ಊದುತ ಪಾಡುತ
ಸ ರಿ ಗ ಮ ಪ ದ ನಿ ಸ್ವರಗಳ ನುಡಿಸುತ
ಹರಿ ಹರ ಬ್ರಹ್ಮರು ನಲಿದಾಡುತಿರೆ
ತುಂಬುರು ನಾರದರು ಪಾಡುತಿರೆ || ೧ ||
ಅರವಿಂದದಳನಯನ
ಕರುಗಳ ಸಹಿತಲೇ ಗೋಕುಲವೆಲ್ಲ
ಸಿರಿ ಕಾಗಿನೆಲೆಯಾದಿಕೇಶವರಾಯ
ತರುಗಳ ಸಹಿತಲೇ ವರಗೋಪಾಲ || ೨ ||